ಉಡುಪಿ : ಜಿಲ್ಲೆಯ ನಾಲ್ಕು ತಾಲೂಕುಗಳ 66 ಗ್ರಾಮ ಪಂಚಾಯತ್ ಗಳಿಗೆ ಬೆಳಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.
ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಹಿರಿಯಡ್ಕದಲ್ಲಿರುವ ಬೊಮ್ಮರಬೆಟ್ಟು ಗ್ರಾಪಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ಗ್ರಾಪಂ ಮತಗಟ್ಟೆಯಲ್ಲಿ ಸುದ್ದಿಗಾರರನ್ನು ಭೇಟಿಯಾದ ಜಿಲ್ಲಾಧಿಕಾರಿ ಜಗದೀಶ್, ನಾಲ್ಕು ತಾಲೂಕುಗಳ 66 ಗ್ರಾಪಂಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ. ಎಲ್ಲೂ ಯಾವುದೇ, ಸಮಸ್ಯೆ ಕಂಡುಬಂದಿಲ್ಲ ಎಂದರು.
ಕೋವಿಡ್ನಿಂದ ಮತದಾನಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಎಲ್ಲಾ ಕಡೆ ಜನ ಕೋವಿಡ್ ಮಾರ್ಗಸೂಚಿಗಳನ್ನು ಅನುಕರಿಸಿ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ ಎಂದರು.