Wednesday, May 31, 2023
Homeಕರಾವಳಿಉದ್ಯಮಿಯ ಮಗನನ್ನುಅಪಹರಿಸಿದ ದುಷ್ಕರ್ಮಿಗಳ ತಂಡ

ಉದ್ಯಮಿಯ ಮಗನನ್ನುಅಪಹರಿಸಿದ ದುಷ್ಕರ್ಮಿಗಳ ತಂಡ

- Advertisement -


Renault

Renault
Renault

- Advertisement -

ಉಜಿರೆ : ಉದ್ಯಮಿಯೊಬ್ಬರ ಮಗನನ್ನು ದುಷ್ಕರ್ಮಿಗಳ ತಂಡವೊಂದು ಅಪಹರಣ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರಥಬೀದಿ ಸಮೀಪ ಆಟವಾಡುತ್ತಿದ್ದ ಬಾಲಕನನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದ್ದು, ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ ಎನ್ನಲಾಗಿದೆ.

ಗುರುವಾರದಂದು ಸಂಜೆ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಇಂಡಿಕಾ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನ್ಯಾಪ್ ಕೃತ್ಯಕ್ಕೆ ಕೈ ಹಾಕಿದ್ದಾರೆ. ಸ್ಥಳೀಯರಿಂದ ದೊರೆತ ಮಾಹಿತಿಯಂತೆ ಕಾರಿನಲ್ಲಿದ್ದವರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ಆದರೆ, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments