- Advertisement -
ಮಂಗಳೂರು : ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕಾವೂರಿನ ಮಲ್ಲಿ ಕಾಲೊನಿಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಕೇರಳ ಮೂಲದ ಸುರೇಂದ್ರನ್(50) ಎಂದು ಗುರುತಿಸಲಾಗಿದೆ.
ಮಂಗಳವಾರದಂದು ಸಂಜೆ ಘಟನೆ ಬೆಳಕಿಗೆ ಬಂದಿದೆ. ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಈಗಾಗಲೇ ದೌಡಾಯಿಸಿದ್ದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಪ್ರಕರಣ ಬಗ್ಗೆ ನಿಖರ ಮಾಹಿತಿಗಳು ಲಭ್ಯವಾಗಲಿದೆ.