- Advertisement -
ಬಂಟ್ವಾಳ : ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಸಹ ಅರ್ಚಕರಾದ ರಮೇಶ್ ಮೂಲ್ಯ (55) ಅವರು ಬುಧವಾರ ನಿಧನರಾಗಿದ್ದಾರೆ.
ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ದೇವಕಿ, ಪುತ್ರರಾದ ಲೋಹಿತ್ ಪಣೋಲಿಬೈಲು, ಪುಷ್ಪರಾಜ್ ಪುತ್ರಿ ಚೈತ್ರಾ ಹಾಗೂ ಅಪಾರ ಬಂಧು ಬಳಗ ಹಿತೈಷಿಗಳನ್ನು ಅಗಲಿದ್ದಾರೆ.