Saturday, June 3, 2023
Homeಕರಾವಳಿಪಾಣೆಮಂಗಳೂರು ನದಿಗೆ ಹಾರಿದ ಯುವಕನ ಶವ ಪತ್ತೆ

ಪಾಣೆಮಂಗಳೂರು ನದಿಗೆ ಹಾರಿದ ಯುವಕನ ಶವ ಪತ್ತೆ

- Advertisement -


Renault

Renault
Renault

- Advertisement -

ಬಂಟ್ವಾಳ : ಪಾಣೆಮಂಗಳೂರು ಸೇತುವೆಯ ಬಳಿ ಯುವಕನೋರ್ವ ನದಿಗೆ ಹಾರಿದ ಘಟನೆ ರವಿವಾರ ನಡೆದಿದ್ದು, ಸೋಮವಾರದಂದು ನದಿ ಕಿನಾರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್(27) ಮೃತ ಯುವಕನಾಗಿದ್ದಾನೆ.

ಯುವಕ ಸೇತುವೆಯ ಬಳಿ ಬ್ಯಾಗನ್ನಿಟ್ಟು ನದಿಗೆ ಹಾರಿರುವ ಬಗ್ಗೆ ದಾರಿಹೋಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ರವಿವಾರದಂದು ದಿನವಿಡಿ ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಆದರೆ ಸೋಮವಾರದಂದು ಶವ ಪತ್ತೆಯಾಗಿದೆ.

ಈತ ಮಂಗಳೂರಿನ ಪಿಜಿಯಿಂದ ಬಂದು ಆದಿತ್ಯವಾರ ಬೆಳಗ್ಗೆ ಪಾಣೆಮಂಗಳೂರು ಹೊಸ ಸೇತುವೆಯಿಂದ ಹಾರಿದ್ದು, ಬ್ಯಾಗಿನಲ್ಲಿ ಸಿಕ್ಕ ಆಧಾರ್ ಕಾರ್ಡ್, ವೋಟರ್ ಐಡಿಯ ಆಧಾರದಲ್ಲಿ ಇದೇ ಯುವಕ ನದಿಗೆ ಹಾರಿದ್ದಾನೆ ಎಂದು ಸಂಶಯಿಸಿ ಮನೆಗೆ ಮಾಹಿತಿ ನೀಡಲಾಗಿತ್ತು. ಮನೆಯವರು ಕೂಡ ಆಗಮಿಸಿದ್ದರು.

ರವಿವಾರ ರಾತ್ರಿವರೆಗೂ ಬಂಟ್ವಾಳ ಅಗ್ನಿಶಾಮಕ ದಳದವರು, ಸ್ಥಳೀಯ ಈಜುಗಾರರು ಬೋಟಿನ ಮೂಲಕ ಸಂಜೆಯವರೆಗೂ ಹುಡುಕಾಡಿದರೂ, ಯುವಕನ ಪತ್ತೆಯಾಗಿರಲಿಲ್ಲ. ಇಂದು ಸಂಜೆ ವೇಳೆ ನದಿ ಕಿನಾರೆಯಗೆ ಶವ ತೇಲಿ ಬಂದಿತ್ತು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments