ಮಂಗಳೂರು: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬೊಕ್ಕಪಟ್ಣದ ಕರ್ನಲ್ ಗಾರ್ಡನ್ ಬಳಿ ನಡೆದಿದೆ.
ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಕೊಲೆ ವ್ಯಕ್ತಿ. ಈತನನ್ನು ಬೊಕ್ಕಪಟ್ಣದ ಕರ್ನಲ್ ಗಾರ್ಡನ್ ಬಳಿ ಕೊಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದ್ದು, ನಿನ್ನೆ ರಾತ್ರಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬರ್ಕೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.