ಮಂಗಳೂರು: ನಗರದ ಯೆಯ್ಯಾಡಿ ಗುರುನಗರ ನಿವಾಸಿ ಹಿರಿಯ ಉದ್ಯಮಿ, ಜಿಬಿ ಕನ್ ಸ್ಟ್ರಕ್ಷನ್ಸ್ ಮಾಲಕ ಗಣೇಶ್ ಬಂಗೇರಾ(62) ಅವರು ಇಂದು ನಸುಕಿನ ಜಾವ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಹಲವಾರು ಧಾರ್ಮಿಕ ಸಂಘಟನೆಗಳಲ್ಲಿ ಅಹರ್ನಿಶಿ ದುಡಿದಿದ್ದ ಬಂಗೇರರು ಗೆಜ್ಜೆಗಿರಿ ಕ್ಷೇತ್ರವೂ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಕೊಡುಗೈ ದಾನಿಯಾಗಿ ಸಾಮಾಜಿಕ ಸಂಘಟನೆಗಳ ಮುಂದಾಳುವಾಗಿದ್ದ ಇವರು ಎಲ್ಲರೊಂದಿಗೆ ಸ್ನೇಹಪರ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು. ಅಲ್ಪಕಾಲದ ಅಸೌಖ್ಯಕ್ಕೆ ತುತ್ತಾಗಿದ್ದ ಅವರು ಇಂದು ನಸುಕಿನ ಜಾವ 2 ಗಂಟೆಗೆ ಹೃದಯಘಾತದಿಂದ ಮೃತರಾದರು. ಇಂದು ಬೆಳಗ್ಗೆ 11 ಗಂಟೆಗೆ ಮೃತರ ಅಂತ್ಯಸಂಸ್ಕಾರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ಹೇಳಿಿವೆ.
ಕೊಡುಗೈ ದಾನಿ, ಯಶಸ್ವೀ ಬಿಲ್ಡರ್ ಗಣೇಶ್ ಬಂಗೇರ ಇನ್ನಿಲ್ಲ
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on