Sunday, September 24, 2023
Homeಕರಾವಳಿಪಾಪ್ಯುಲರ್ ಫ್ರಂಟ್ ಯುನಿಟಿ ಮಾರ್ಚ್ ವಿರುದ್ಧ ಕೇಸ್…!!!

ಪಾಪ್ಯುಲರ್ ಫ್ರಂಟ್ ಯುನಿಟಿ ಮಾರ್ಚ್ ವಿರುದ್ಧ ಕೇಸ್…!!!

- Advertisement -



Renault

Renault
Renault

- Advertisement -

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಂಸ್ಥಾಪನಾ ದಿನದ ಅಂಗವಾಗಿ ಉಳ್ಳಾಲದಲ್ಲಿ ನಡೆದ ಯುನಿಟಿ ಮಾರ್ಚ್‌ ಕಾರ್ಯಕ್ರಮದಲ್ಲಿ ಕೋಮು ಭಾವನೆ ಕೆರಳಿಸುವ ಹುನ್ನಾರ, ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂಬ ಆರೋಪದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಪಥ ಸಂಚಲನದ ವೇಳೆ ಆರೆಸ್ಸೆಸ್ ಹಾಗೂ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಘೋಷಣೆ, ಪರವಾನಿಗೆ ಇಲ್ಲದೇ ಮೆರವಣಿಗೆ ನಡೆಸಿ ಅಶಾಂತಿಯ ವಾತಾವರಣ ಸೃಷ್ಟಿಸಲು ಪ್ರಯತ್ನ ಮತ್ತು 400ಕ್ಕೂ ಅಧಿಕ ಸಮವಸ್ತ್ರಧಾರಿ ತಂಡ ಪೊಲೀಸರ ಸೂಚನೆಯನ್ನು ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕರಿಗೂ ತೊಂದರೆ ನೀಡಿದ್ದಾರೆ ಎಂದು ಆರೋಪದಡಿ ಪ್ರಕರಣ ದಾಖಲಿಸಲಾಗಿದೆ‌ ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಅಬ್ದುಲ್ ಖಾದರ್ ಕುಳಾಯಿ, ಶಹೀದ್ ದೇರಳಕಟ್ಟೆ, ಸಫ್ವಾನ್, ಇಮ್ತಿಯಾಝ್ ಕೋಟೆಪುರ, ಖಲೀಲ್ ಕಡಪ್ಪರ, ರಮೀಝ್ ಕೋಡಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಪ್ಯುಲರ್ ಫ್ರಂಟ್ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಯುನಿಟಿ ಮಾರ್ಚ್ ಮತ್ತು ಸಾರ್ವಜನಿಕ ಸಭಾ ಕಾರ್ಯಕ್ರಮವನ್ನು ವರ್ಷಂಪ್ರತಿ ಬಹಳ ಅಚ್ಚುಕಟ್ಟಾಗಿ, ಶಿಸ್ತಿನಿಂದ ಆಚರಿಸಲಾಗುತ್ತದೆ. ಆದರೆ ಪೊಲೀಸರು ಯುನಿಟಿ ಮಾರ್ಚ್ ನಡೆಸಲು ಅನುಮತಿ ನಿರಾಕರಿಸಿ ತಾರತಮ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ತೊಕ್ಕೊಟ್ಟುವಿನಲ್ಲಿ ಸಂಘಪರಿವಾರದ ಸಂಘಟನೆಗಳು ಕಾರ್ಯಕ್ರಮ ನಡೆಸಿ ಉದ್ರೇಕಕಾರಿ ಭಾಷಣ ಮಾಡಿದ್ದರು. ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಾವು ಮಾಡುವ ಕಾರ್ಯಕ್ರಮಕ್ಕೆ ಅಡಚಣೆ ಏನಿದೆ ? ನಾವು ನಡೆಸುವ ಕಾರ್ಯಕ್ರಮಕ್ಕೆ ಯಾಕಾಗಿ ಪರವಾನಿಗೆ ನೀಡಿಲ್ಲ? ನಮಗೆ ಕಾರ್ಯಕ್ರಮ ನಡೆಸಲು ಸಂವಿಧಾನಾತ್ಮಕವಾಗಿ ಅವಕಾಶ ನೀಡದಿರಲು ಕಾರಣ ಏನು ? ಇಲಾಖೆ ಏನು ತೀರ್ಮಾನ ತೆಗೆದು ಕೊಂಡಿದೆಯೋ ಅದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments