ಮೈಸೂರು:ಪರಿಶಿಷ್ಟ ಜಾತಿ ಸಮುದಾಯದವರು ಚುನಾವಣೆಯಲ್ಲಿ ತನಗೆ ಮತ ಹಾಕಲಿಲ್ಲವೆಂದು ಗ್ರಾಮದ ಜನರೊಂದಿಗೆ ಗೂಂಡಾ ವರ್ತನೆ ತೋರಿದ ಗ್ರಾ.ಪಂ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇಹೆಗ್ಗುಡಿಲು ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜು ಬಂಧಿತ ಆರೋಪಿ.
ಈತ ಗ್ರಾಪಂ ಸದಸ್ಯನಾದ ದಿನದಿಂದಲೂ ತನಗೆ ಗ್ರಾಮದ ಪರಿಶಿಷ್ಟ ಜಾತಿ ಜನಾಂಗ ಮತ ಹಾಕಿಲ್ಲ ಎಂದು ನಿತ್ಯವೂ ಗ್ರಾಮದ ಜನರೊಂದಿಗೆ ಗಲಾಟೆ ಮಾಡುತ್ತಿದ್ದ. ಶನಿವಾರ ರಾತ್ರಿ ಕೂಡ ಇದೇ ರೀತಿ ಗಲಾಟೆ ಮಾಡಿ, ಗ್ರಾಮದ ಯೋಗೇಶ್ ಎಂಬ ಯುವಕನನ್ನು ಥಳಿಸಲು ಮುಂದಾಗಿದ್ದಾನೆ. ಈ ವೇಳೆ ಗ್ರಾಮದ ಜನರನ್ನೆಲ್ಲ ಆತನನ್ನು ನಿಂದಿಸಿದ್ದಾನೆ ಎನ್ನಲಾಗಿದೆ.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಸರಗೂರು ಠಾಣಾ ಪೊಲೀಸರು ಗ್ರಾಪಂ ಸದಸ್ಯ ಶಿವರಾಜುನನ್ನು ವಶಕ್ಕೆ ಪಡೆದರು.
ಗ್ರಾಪಂ ಸದಸ್ಯನಿಂದ ತನಗೆ ಮತ ನೀಡದವರ ಮೇಲೆ ಗೂಂಡಾಗಿರಿ, ಪೊಲೀಸ್ ಬಂಧನ.
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on