- Advertisement -
ಬಂಟ್ವಾಳ: ಅಯೋಧ್ಯೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದ್ದಾರೆ. ಹೌದು ಪ್ರಭಾಕರ ಭಟ್ ಪತ್ನಿ ಕಮಲಾ ಪ್ರಭಾಕರ ಭಟ್ ಸೇರಿ ಹಿಂದೂ ಮುಖಂಡರು ಪೂಜಾರಿ ಮನಗೆ ನೀಡಿದ್ದಾರೆ.
ಈ ವೇಳೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜನಾರ್ದನ ಪೂಜಾರಿ ಕಾಲಿಗೆ ನಮಿಸಿದ್ದಾರೆ. ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದ ಕಲ್ಲಡ್ಕ ಭಟ್ ಜನಾರ್ದನ ಪೂಜಾರಿ ಆರೋಗ್ಯ ವಿಚಾರಿಸಿದರು.
ಈ ವೇಳೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಜನಾರ್ದನ ಪೂಜಾರಿ ಬೆಂಬಲ ವ್ಯಕ್ತಪಡಿಸಿದರು.