- Advertisement -
ಉಳ್ಳಾಲ: ಬೈಕ್ ನಲ್ಲಿ ಬಂದ ಆಗಂತುಕರಿಬ್ಬರು ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ನಡೆದಿದೆ.
ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಹರೇಕಳ ನಿವಾಸಿ ಶಾಂತಾ ಅವರ ಸರ ಎಳೆದು ಪರಾರಿಯಾಗಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.