ಎರಡನೆಯ ಹಂತದ ಕೋವಿಡ್ ಎದುರಿಸಲು ರಾಜ್ಯ ಸರ್ಕಾರ ಯಾವ ಸಿದ್ಧತೆ ನಡೆಸಿದೆ ಮತ್ತು ಜನರಿಗೆ ಯಾವ ರೀತಿಯಲ್ಲಿ ಜಾಗೃತಿ ನೀಡಲಿದೆ ಎಂಬ ಕುರಿತು ಸರ್ಕಾರದ ವೈಜ್ಞಾನಿಕ ಸಮಿತಿ ನೀಡಿರುವ ವರದಿಯನ್ನು ಜನತೆಗೆ ತಿಳಿಸಬೇಕು. ವೈಜ್ಞಾನಿಕ ಆಧಾರದಲ್ಲಿಯೇ ತೀರ್ಮಾನ ಕೈಗೊಳ್ಳಬೇಕು. ಗೊಂದಲಕ್ಕೆ ಅವಕಾಶ ಕಲ್ಪಿಸಬಾರದು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಹೇಳಿಕೆಯಿಂದ ಈಗಾಗಲೇ ಜನತೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಸರ್ಕಾರ ಜನರ ಆರೋಗ್ಯದ ಬಗ್ಗೆ ಕೈಗೊಳ್ಳುವ ತೀರ್ಮಾನ ವೈಜ್ಞಾನಿಕ ಆಧಾರದಲ್ಲಿರಬೇಕೇ ಹೊರತು ರಾಜಕೀಯವಾಗಿರಬಾರದು ಎಂದರು.
ಪ್ರಸ್ತುತ ಆಯುಷ್ಮಾನ್ ಯೋಜನೆಯಡಿ ಐಸಿಯುಗೆ ದಾಖಲಾದ ಕೋವಿಡ್ ರೋಗಿಗಳಿಗೆ ಮಾತ್ರವೇ ಸೌಲಭ್ಯ ದೊರೆಯುತ್ತಿದೆ. ಎರಡನೆಯ ಹಂತದ ಕೋವಿಡ್ ವ್ಯಾಪಕವಾದಲ್ಲಿ ಆಯುಷ್ಮಾನ್ನಡಿ ಚಿಕಿತ್ಸೆ ದೊರೆಯದೆ ಜನಸಾಮಾನ್ಯರು ತೊಂದರೆಗೊಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಹಿಂದಿನಂತೆಯೇ ಕೋವಿಡ್ ರೋಗಿಗಳಿಗೆ ಆಯುಷ್ಮಾನ್ನಡಿ ಚಿಕಿತ್ಸೆ ದೊರೆಯುವಂತಹ ಆದೇಶವನ್ನು ಸರ್ಕಾರ ಹೊರಡಿಸಬೇಕು ಎಂದು ಖಾದರ್ ಒತ್ತಾಯಿಸಿದರು
ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿ: ಶಾಸಕ ಖಾದರ್
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on