ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.