ಬೆಂಗಳೂರು, ಜ. 13: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜ.13) ಮದ್ಯಾಹ್ನ 3.50ಕ್ಕೆ ರಾಜಭವನದಲ್ಲಿ ನಡೆಯಲಿದೆ. ಈಗಾಗಲೇ 7 ಜನರು ಹೊಸದಾಗಿ ಸಿಎಂ ಯಡಿಯೂರಪ್ಪ ಅವರ ಸಂಪುಟ ಸೇರುವುದು ಖಚಿತವಾಗಿದೆ. ಆದರೆ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಆರ್‌ಆರ್‌ ನಗರ ಶಾಸಕ ಮುನಿರತ್ನ ಅವರು ಸಂಪುಟ ಸೇರಲು ಇನ್ನೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿದೆ.ಹೀಗಾಗಿ 8ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಶಾಸಕ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಹೈಕಮಾಂಡ್ ಇನ್ನೂ ಒಪ್ಪಿಗೆ ಕೊಟ್ಟಿಲ್ಲ ಎಂಬ ಮಾಹಿತಿಯಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಳಗ್ಗೆ 9.30ಕ್ಕೆ ಬೆಂಗಳೂರಿಗೆ ಬರಲಿದ್ದು, ಬಳಿಕ 10 ಗಂಟೆಗೆ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಅಂತಿಮ ತೀರ್ಮಾನವಾಗಲಿದೆ ಎನ್ನಲಾಗಿದೆ.ಉಳಿದಂತೆ 7 ಜನರು ಯಡಿಯೂರಪ್ಪ ಅವರ ಸಂಪುಟ ಸೇರುವುದು ಖಚಿತವಾಗಿದ್ದು ಅವರ ಹೆಸರುಗಳು ಹೀಗಿವೆ!

* ಎಂಟಿಬಿ ನಾಗರಾಜ್-ವಿಧಾನ ಪರಿಷತ್ ಸದಸ್ಯ* ಆರ್. ಶಂಕರ್-ವಿಧಾನ ಪರಿಷತ್ ಸದಸ್ಯ* ಸಿ.ಪಿ. ಯೋಗೇಶ್ವರ್-ವಿಧಾನ ಪರಿಷತ್ ಸದಸ್ಯ* ಉಮೇಶ್ ಕತ್ತಿ-ಹುಕ್ಕೇರಿ ಶಾಸಕ* ಅರವಿಂದ ಲಿಂಬಾವಳಿ-ಮಹದೇವಪುರ ಶಾಸಕ* ಮುರುಗೇಶ್ ‌ನಿರಾಣಿ-ಬೀಳಗಿ ಶಾಸಕ* ಎಸ್. ಅಂಗಾರ-ಸುಳ್ಯ ಶಾಸಕ* ಮುನಿರತ್ನ ನಾಯ್ಡು-ಆರ್‌ಆರ್ ನಗರ ಶಾಸಕ (ಹೈಕಮಾಂಡ್ ಒಪ್ಪಿಗೆ ಸೂಚಿಸಿದಲ್ಲಿ)

LEAVE A REPLY

Please enter your comment!
Please enter your name here