ಬಳ್ಳಾರಿ : ಇಷ್ಟು ದಿನ ಸೈಲೆಂಟ್ ಆಗಿದ್ದ ಗಾಲಿ ಕರುಣಾಕರ ರೆಡ್ಡಿ ಸಂಕ್ರಾಂತಿ ಬಳಿಕ ಪ್ರಕಾಶಿಸುತ್ತಿದ್ದಾರೆ. ಬಿಜೆಪಿಯಲ್ಲಿ ಇದ್ದರೂ ಇಲ್ಲದಂತಿದ್ದ ಕರುಣಾಕರ ರೆಡ್ಡಿ ‘ಕಳೆದ 26 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ಆದರೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರವಿಲ್ಲ’ ಎಂದು ಹೇಳುವ ಮೂಲಕ ರಾಜಕೀಯ ಮುನ್ನಲೆಗೆ ಬಂದಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಸರ್ಕಾರದಲ್ಲಾದರೂ ಎಷ್ಟು ಬಾರಿ ಸಚಿವ ಸಂಪುಟ ವಿಸ್ತರಣೆಯಾದರೂ ಅಸಮಾಧಾನ ಕಾಮನ್ ಆಗಿದೆ. ಇದು ನಿರಂತರ ಪ್ರಕ್ರಿಯೆ. ಇದೀಗ ನಮ್ಮ ಸರ್ಕಾರದಲ್ಲೂ ಅದೇ ಸಮಸ್ಯೆಯಾಗಿದೆ. ಎಲ್ಲರನ್ನೂ ಸಮಾಧಾನ ಪಡಿಸಲು ಯಾರಿಂದಲು ಸಾಧ್ಯವಿಲ್ಲ. ಅಸಮಾಧಾನಿತರ ಪಕ್ಷ ವಿರೋಧಿ ಹೇಳಿಕೆಗಳು ಅವರ ವೈಯಕ್ತಿಕ ವಿಚಾರ.ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on