ಸುಲಿಗೆ ಪ್ರಕರಣ ಸಂಬಂಧ ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರಿಗೆ ಮುಂಬೈ ಸೆಷನ್ಸ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಟ್ಟಡ ಗುತ್ತಿಗೆದಾರ ನಂದು ವಾಜೇಕರ್ ಎಂಬವರಿಗೆ ಬೆದರಿಕೆ ಹಾಕಿ, ಅವರಿಂದ 26 ಕೋಟಿ ರೂ. ಹಣ ಸುಲಿಗೆ ಮಾಡಿದ್ದ ಆರೋಪದಡಿ ಛೋಟಾ ರಾಜನ್ಗೆ ಜೈಲು ಶಿಕ್ಷೆ ನೀಡಲಾಗಿದೆ.
ಈತ 2015ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಂದು ವಾಜೇಕರ್ ಜಮೀನೊಂದನ್ನು ಖರೀದಿಸಿದ್ದರು. ಈ ವೇಳೆ ಪರಮಾನಂದ್ ಠಕ್ಕರ್ ಎಂಬ ಮಧ್ಯವರ್ತಿಗೆ 2 ಕೋಟಿ ರೂ. ಕಮಿಷನ್ ನೀಡಿದ್ದರು. ಆದರೆ ಠಕ್ಕರ್ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ್ದು, ಇದಕ್ಕೆ ವಾಜೇಕರ್ ಒಪ್ಪಲಿಲ್ಲ. ಹೀಗಾಗಿ ಠಕ್ಕರ್ ಛೋಟಾ ರಾಜನ್ನನ್ನು ಸಂಪರ್ಕಿಸಿದ್ದರು. ಈ ಸಂದರ್ಭ ವಾಜೇಕರ್ ಕಚೇರಿಗೆ ತನ್ನ ಗ್ಯಾಂಗ್ ಕಳುಹಿಸಿದ್ದ ಛೋಟಾ ರಾಜನ್, 26 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದ ಹಾಗೂ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಹೇಳಿದ್ದ.
ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ, ಛೋಟಾ ರಾಜನ್ ಹಾಗೂ ಆತನ ಸಹಚರರಾದ ಸುರೇಶ್ ಶಿಂಧೆ, ಲಕ್ಷ್ಮಣ್ ನಿಕಮ್, ಸುಮಿತ್ ವಿಜಯ್ ಮಾಟ್ರೆಗೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಭೂಗತ ಪಾತಕಿ ಛೋಟಾ ರಾಜನ್ ಸೇರಿದಂತೆ ನಾಲ್ವರಿಗೆ 2 ವರ್ಷ ಜೈಲು!
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on