Tuesday, June 6, 2023
Homeಕರಾವಳಿದೇರೆಬೈಲ್ ದಕ್ಷಿಣ : ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ದೇರೆಬೈಲ್ ದಕ್ಷಿಣ : ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

- Advertisement -


Renault

Renault
Renault

- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ದಕ್ಷಿಣ ವಾರ್ಡಿನ ಶ್ರೀ ಚಾಮುಂಡೇಶ್ವರಿ ಪಂಜುರ್ಲಿ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ದೇರೆಬೈಲ್ ದಕ್ಷಿಣ ವಾರ್ಡಿನ ಶ್ರೀ ಚಾಮುಂಡೇಶ್ವರಿ ಪಂಜುರ್ಲಿ ದೇವಸ್ಥಾನಕ್ಕೆ ಹೋಗುವ ದಾರಿ ಅಭಿವೃದ್ಧಿಪಡಿಸಲು ಸ್ಥಳೀಯರ ಹಾಗೂ ಕ್ಷೇತ್ರದ ಸಮಿತಿಯ ಬೇಡಿಕೆಯಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಕಾರ್ಯದಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಬಹಳಷ್ಟು ಉಪಯೋಗವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅದ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು, ಮಾಜಿ ಮೇಯರ್ ಪ್ರವೀಣ್ ಕುಮಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಚರಿತ್ ಪೂಜಾರಿ, ಗುರುದತ್ ಕೋಟ್ಯಾನ್, ಸುನಂದಾ, ಸುಧಾಕರ್, ಶಾಂಭವಿ, ಪವನ್, ಪ್ರಜ್ವಲ್, ಶ್ರೀನಿವಾಸ್ ಪೈ, ರವಿರಾಜ್, ಸ್ಥಳೀಯರಾದ ಡಾ. ಮುರಳಿ ಕುಮಾರ್, ವಾಸುದೇವ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments