Sunday, September 24, 2023
Homeಕರಾವಳಿಹಿಂದುತ್ವ ಹೇಳುವವರು ಕೋಮುವಾದಿಗಳು:ಸಿದ್ದರಾಮಯ್ಯ ವಾಗ್ದಾಳಿ

ಹಿಂದುತ್ವ ಹೇಳುವವರು ಕೋಮುವಾದಿಗಳು:ಸಿದ್ದರಾಮಯ್ಯ ವಾಗ್ದಾಳಿ

- Advertisement -



Renault

Renault
Renault

- Advertisement -

ಮಂಗಳೂರು : ಕೋಮುವಾದವನ್ನು ಯಾರೇ ಮಾಡಲಿ ಅದು ಕೋಮುವಾದನೇ ಕೋಮುವಾದ ಇರುವಲ್ಲಿ ಶಾಂತಿ ನೆಮ್ಮದಿ ಇರೋದಿಲ್ಲ ಹಿಂದುತ್ವ ಹೇಳುವವರು ಭಾರತೀಯರಲ್ಲ, ಹಿಂದುತ್ವ ಹೇಳುವವರು ಕೋಮುವಾದಿಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ನಗರದ ಪುರಭವನದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್‌ರ ಪದಗ್ರಹಣ ಸಮಾರಂಭ ಹಾಗೂ ಭಾವೈಕ್ಯತಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಂಗಳೂರಿನ ಪುರಭವನದಲ್ಲಿ ನಡೆಯುತ್ತಿರುವ ಭಾವೈಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು ಸಂಘ ಪರಿವಾರದ ವಿರುದ್ಧ ಗುಡುಗಿದ ಅವರು ಸಾವರ್ಕರ್ ತ್ರಿವಣ ಧ್ವಜ ಒಪ್ಪೋದಿಲ್ಲ ಆದರೆ ಕೇಸರಿ ಧ್ವಜವನ್ನು ಒಪ್ಪಿಕೊಳ್ಳುತ್ತಾರೆ, ಕಳೆದ 52 ವರ್ಷ ನಾಗ್ಪುರದ ಕಛೇರಿಯಲ್ಲಿ ರಾಷ್ಟ್ರ ಧ್ವಜ ಹಾರಿಸಿಲ್ಲ ಇದೊಂದು ಸುಳ್ಳು ಸಂಘಟನೆ ಎಂದ ಅವರು ಸಂವಿಧಾನವನ್ನು ಆರೆಸ್ಸೆಸ್ ಒಪ್ಪೋದಿಲ್ಲ ಸಂವಿಧಾನದ ವಿರುದ್ಧ ಷಡ್ಯಂತ್ರ ಮಾಡಿ ಮುಗಿಸಲು ಹೊರಟಿದ್ದಾರೆ ಸಂಘ ಪರಿವಾರದವರು ಮೀಸಲಾತಿ ವಿರುದ್ಧ ಇದ್ದಾರೆ ಹಾಗಾಗಿ ಮೀಸಲಾತಿ ತೆಗೆಯಲು ಬಿಜೆಪಿಯವರು ಹುನ್ನಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇತ್ತೇಚೆನ ದಿನಗಳಲ್ಲಿ ಕರಾವಳಿಯನ್ನು ಕೋಮುವಾದದ ಪ್ರಯೋಗಾಲಯವನ್ನಾಗಿ ಮಾಡಿದ್ದಾರೆ ಆರೆಸ್ಸೆಸ್ ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಅಂತಾ ಹೇಳುತ್ತಾರೆ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವೇ ಇಲ್ಲ, ಆರೆಸ್ಸೆಸ್ ಒಂದು ಜಾತಿ ಸಂಘಟನೆಯಾಗಿದೆ ಆರೆಸ್ಸೆಸ್ ನವ್ರು ದೇಶ ಭಕ್ತರು ಅಂತಾ ಹೇಳ್ತಾರೆ ಹಾಗಾದರೆ ಸ್ವಾತಂತ್ರ್ಯ ಹೋರಾಟಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಸಿದ್ದು, 1977 ರಲ್ಲಿ ಜನತಾಪಾರ್ಟಿ ಆಗದೇ ಇರುತ್ತಿದ್ದರೆ ಇಷ್ಟೊಂದು ಶಕ್ತಿ ಬರುತ್ತಿರಲಿಲ್ಲ ಹೆಗಡೇವಾರ್ ಬಳಿಕ ಗೋಳ್ವಾಲ್ಕರ್ ಆರೆಸ್ಸೆಸ್ ಮುಖ್ಯಸ್ಥರು ಬಂದ್ರು ಆದರೆ ಇವರು ಯಾರೂ ದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿಲ್ಲ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯೀದ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ನಾಸಿರ್ ಹುಸೈನ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಮಾಜಿ ಶಾಸಕ ಜೆ.ಆರ್.ಲೋಬೋ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಯಿಶಾ ಫರ್ಝಾನಾ ಯುಟಿ ಸದ್ಭಾವನಾ ಭಾಷಣಗೈದರು.

SFI ಮತ್ತು PFI ಎರಡೂ ಒಂದೇ :
PFI,SDPI ಯವರ ಮಾತುಗಳನ್ನು ಕೇಳೋಕೆ ಹೋಗಬೇಡಿ ಇವರು ಬಿಜೆಪಿಗೆ ಹಿಂದಿನಿಂದ ಪ್ರೋತ್ಸಾಹ ನೀಡುವವರು, ಬಿಹಾರದ ಚುನಾವಣೆಯಲ್ಲೂ ಇವರಿಂದ ಬಿಜೆಪಿಗೆ ಲಾಭವಾಯಿತು, ಮುಸ್ಲಿಮರ ಓಟನ್ನು ಒಡೆಯುವಂತಗ ಹುನ್ನಾರ ಮಾಡುತ್ತಿದ್ದಾರೆ ಈ ಹುನ್ನಾರಕ್ಕೆ ಯಾರೂ ಕೈ ಜೋಡಿಸಬಾರದು ಬೆಂಗಳೂರು ಗಲಭೆ ಸಂಧರ್ಭದಲ್ಲಿ SDPI, PFI ಬ್ಯಾನ್ ಅಂತಾ ಹೇಳಿದ್ರು ಸೂಕ್ತ ದಾಖಲೆಯಿದ್ದರೆ ಕೂಡಲೇ ಬ್ಯಾನ್ ಮಾಡಬೇಕು SFI ಮತ್ತು PFI ಎರಡೂ ಒಂದೇ ಹಿಂದೂಗಳಲ್ಲೂ ಅನೇಕ ಜನ ಮುಸ್ಲಿಮರ ರೀತಿ ಇದ್ದಾರೆ ಎಂದು ಹೇಳಿದರು.

ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು, ನಾನು ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರಿಗೆ ಮೂರುಸಾವಿರದ ಐವತ್ತು ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ, ಆದರೆ ಬಿಜೆಪಿಯವರು ಇದ್ದ ಅನುದಾನದಲ್ಲೂ ಅಲ್ಪಸಂಖ್ಯಾತರಿಗೆ ಕಡಿಮೆ ಮಾಡಿದ್ದಾರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ ಎಂದು ಗುಡುಗಿದ್ದಾರೆ.

ಗೋ ಹತ್ಯೆ ನಿಷೇಧವನ್ನು ಒಂದು ಧರ್ಮವನ್ನು ಗುರಿಯಾಗಿಸಿ ಜಾರಿ ಮಾಡಿದ್ದಾರೆ ಬೀಫ್ ತಿನ್ನೋದು ಅವರವರ ಆಹಾರದ ಹಕ್ಕು ಅದನ್ನು ನಿಯಂತ್ರಣ ಮಾಡೋಕೆ‌ ನೀವು ಯಾರು ನಾನು ಇಲ್ಲಿಯವರೆಗೆ ಭೀಫ್ ತಿಂದಿಲ್ಲ ತಿನ್ನಬೇಕು ಅನಿಸಿದರೆ ಬೀಫ್ ತಿನ್ನುತ್ತೇನೆ ಅದನ್ನು ಕೇಳೋಕೆ ಬಿಜೆಪಿಯವರು ಯಾರು. ಬೀಫ್ ತಿನ್ನಬಾರದು ಅಂತಾ ಹೇಳುತ್ತಾರೆ ಆದರೆ ಆಸ್ಟ್ರೇಲಿಯಾ ದಿಂದ ಬಂದ ಭೀಫ್ ನ್ನು ತಿನ್ನಬಹುದು ಅಂತಾ ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ

- Advertisement -

LEAVE A REPLY

Please enter your comment!
Please enter your name here

Most Popular

Recent Comments