Sunday, September 24, 2023
Homeಕ್ರೈಂಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್​​ ಎಸ್ಟೇಟ್​ ಉದ್ಯಮಿ ಬರ್ಬ ಕೊಲೆ!!!

ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್​​ ಎಸ್ಟೇಟ್​ ಉದ್ಯಮಿ ಬರ್ಬ ಕೊಲೆ!!!

- Advertisement -



Renault

Renault
Renault

- Advertisement -

ಬೆಂಗಳೂರು; ಆನೇಕಲ್​ ಸಮೀಪದ ಬ್ಯಾಗಡದೇನಹಳ್ಳಿ ಬಳಿ ರಿಯಲ್​​ ಎಸ್ಟೇಟ್​ ಉದ್ಯಮಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಾಜಶೇಖರ್ ರೆಡ್ಡಿ ರಿಯಲ್​​ ಎಸ್ಟೇಟ್​ ಉದ್ಯಮಿ. ಮೂಲತಃ ಆಂಧ್ರಪ್ರದೇಶದವರಾದ ರಾಜಶೇಖರ್ ರೆಡ್ಡಿ, ಬೆಂಗಳೂರಿನ ಬಿಟಿಎಂ ಬಡಾವಣೆಯಲ್ಲಿ ವಾಸವಾಗಿದ್ದರು.

ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಅವರು, ನಿನ್ನೆ ಬ್ಯಾಗಡದೇನಹಳ್ಳಿ ಬಳಿಯ ಜಮೀನೊಂದರ ರಿಜಿಸ್ಟರ್​ಗೆ ತೆರಳಿದ್ದರು. ಈ ವೇಳೆ ಕಾರಿನಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಪೊಲೀಸರು ರಾಜಶೇಖರ್ ರೆಡ್ಡಿ ಮೊಬೈಲ್​ಗೆ ಬಂದಿರುವ ಕೊನೆಯ ಕರೆಗಳ ಪರಿಶೀಲನೆ ನಡೆಸುತ್ತಿದ್ದು, ಕೊಲೆಯಾದ ಸಮಯದಲ್ಲೇ ರಾಜಶೇಖರ್ ರೆಡ್ಡಿಗೆ ವಕೀಲರಿಂದ ನಿರಂತರ ಕರೆಗಳು ಬಂದಿವೆ. ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿರುವ ಬೈಕ್ ನಂಬರ್ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

- Advertisement -

2 COMMENTS

LEAVE A REPLY

Please enter your comment!
Please enter your name here

Most Popular

Recent Comments