ಕೋಣಾಜೆ, ಫೆ.16: ಮಂಜನಾಡಿಯ ನಾಟೆಕಲ್ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಜುಲ್ಫಿ ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ಮಲ್ಲಿಕಾರ್ಜುನ ಬಿರಾದಾರ್ ಗಸ್ತು ತಿರುಗುತ್ತಿದ್ದಾಗ ಆರೋಪಿ ಧೂಮಪಾನ ಮಾಡುತ್ತಿದ್ದು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪೊಲೀಸ್ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಕುಳೂರಿನಲ್ಲಿ ಆಕರ್ಷ್ ಕೆ. (23), ಪ್ರವಿತ್ ಡಿ. (23) ಸಿಗರೇಟ್ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ. ಅವರನ್ನು ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.